25.9 C
ಪುತ್ತೂರು, ಬೆಳ್ತಂಗಡಿ
June 20, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ , ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಪುರಂದರ ಬಜಿಲ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಸಾಕಾರ ರಾಜನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಮಾರಿದತ್ತನಾಗಿ ಚಂದ್ರಶೇಖರ ಧರ್ಮಸ್ಥಳ, ಪದ್ಮಿನಿಯಾಗಿ ಈಶ್ವರ ಪ್ರಸಾದ ಪಿವಿ, ಜಿನದತ್ತನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಪಾಚಕನಾಗಿ ಶಶಿಧರ ಕನ್ಯಾಡಿ, ಶ್ರೀಯಲೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸಿದ್ದಾಂತ ಕೀರ್ತಿ ಮುನಿಗಳಾಗಿ ಮಹಾವೀರ ಪಾಂಡಿ ಕಾಂತಾವರ ಪಾತ್ರ ನಿರ್ವಹಿಸಿದರು.
ತಾಳಮದ್ದಲೆಯನ್ನು ಪ್ರಾಯೋಜಿಸಿದ ಪದ್ಮಪ್ರಸಾದ್ ಜೈನ್ ಮತ್ತು ಅವರ ಶ್ರೀಮತಿ ಅವರನ್ನು ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯಕ್ಷಭಾರತಿಯ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya
error: Content is protected !!