28.6 C
ಪುತ್ತೂರು, ಬೆಳ್ತಂಗಡಿ
September 19, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ , ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಪುರಂದರ ಬಜಿಲ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಸಾಕಾರ ರಾಜನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಮಾರಿದತ್ತನಾಗಿ ಚಂದ್ರಶೇಖರ ಧರ್ಮಸ್ಥಳ, ಪದ್ಮಿನಿಯಾಗಿ ಈಶ್ವರ ಪ್ರಸಾದ ಪಿವಿ, ಜಿನದತ್ತನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಪಾಚಕನಾಗಿ ಶಶಿಧರ ಕನ್ಯಾಡಿ, ಶ್ರೀಯಲೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸಿದ್ದಾಂತ ಕೀರ್ತಿ ಮುನಿಗಳಾಗಿ ಮಹಾವೀರ ಪಾಂಡಿ ಕಾಂತಾವರ ಪಾತ್ರ ನಿರ್ವಹಿಸಿದರು.
ತಾಳಮದ್ದಲೆಯನ್ನು ಪ್ರಾಯೋಜಿಸಿದ ಪದ್ಮಪ್ರಸಾದ್ ಜೈನ್ ಮತ್ತು ಅವರ ಶ್ರೀಮತಿ ಅವರನ್ನು ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯಕ್ಷಭಾರತಿಯ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!