24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರಾಜಶ್ರೀ ಹಾಗೂ ದೈಹಿಕ ಶಿಕ್ಷಣ ಪರೀಕ್ಷಕರಾದ ಪ್ರಭಾಕರ್ ಭೇಟಿ ನೀಡಿ ಶಾಲೆಯ ವಿವಿಧ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ‘ಶ್ರೀ ಮಂಜುನಾಥ ದಳ’ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುವ ಪ್ರತಿಷ್ಠಿತ ಗೋಲ್ಡನ್ ಆ್ಯರೋ ಪ್ರಶಸ್ತಿ ಕುರಿತು ಪರಿಶೀಲನೆ ನಡೆಸಿ, ಶಾಲೆಯ ಯೋಗ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶೈಕ್ಷಣಿಕ ಫಲಿತಾಂಶಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಅಲ್ಲದೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಚಿರಾಗ್, ಅಹನ್ ಜೈನ್, ವಿಹಾನ್, ದೈವಿಕ್ ರೈ, ಆದ್ವಿ ಎಲ್. ರೈ ಹಾಗೂ ಯಕ್ಷಿತಾ ಅವರನ್ನು ರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶಾಲಾ ಶಿಕ್ಷಕಿ ಪ್ರಮೀಳ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್., ಚಿತ್ರಕಲಾ ಶಿಕ್ಷಕರಾದ ಜಯರಾಮ್ ಹಾಗೂ ಕನ್ನಡ ಶಿಕ್ಷಕರಾದ ಶ್ರೇಯಾಂಸ ಜೈನ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya
error: Content is protected !!