28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿ ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡಿದ್ದು, ಈ ಗುಂಡಿಯನ್ನು ನಗರ ಪಂಚಾಯತು ಮುಚ್ಚುವ ಕಾಮಗಾರಿ ನಡೆಸಿದೆ.

ಕೋರ್ಟು ರಸ್ತೆಯಲ್ಲಿ ರಸ್ತೆ ಬದಿ ಅಪಾಯಕಾರಿ ಗುಂಡಿ ನಿರ್ಮಾಣವಾಗಿ ಪಾದಾಚಾರಿಗಳಿಗೆ, ವಾಹನ ಚಾಲಕರಿಗೆ ಸಮಸ್ಯೆಯಾಗಿರುವ ಕುರಿತು ಈ ವಾರದ ‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಮ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗರ ಕಡೆ ಪ್ರತಿ ದಿನ ನೂರಾರು

ಸಂಖ್ಯೆಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆ ಬದಿ ನಿರ್ಮಾಣವಾದ ಈ ಗುಂಡಿ ಬಳಿ ಕಲ್ಲು ಇಟ್ಟಿರುವುದರಿಂದ ಎಲ್ಲರಿಗೂ ಗೊತ್ತಾಗಿದೆ. ಇಲ್ಲವಾದರೆ ಈ ಗುಂಡಿಗೆ ಯಾರಾದರೂ ಬಿದ್ದು ಹಾನಿ ಸಂಭವಿಸುವ ಸಾಧ್ಯತೆ ಇತ್ತು ಎಂದು ನ.ಪಂ ಮಾಜಿ ಹಿರಿಯ ಸದಸ್ಯ ಜಗದೀಶ್ ಡಿ ತಿಳಿಸಿದ್ದರು. ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ನಗರ ಪಂಚಾಯತು ಅಧಿಕಾರಿಗಳು ಈಗ ಗುಂಡಿಯನ್ನು ಮುಚ್ಚುವ ಕಾಮಗಾರಿಯನ್ನು ನಡೆಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya
error: Content is protected !!