30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿ ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡಿದ್ದು, ಈ ಗುಂಡಿಯನ್ನು ನಗರ ಪಂಚಾಯತು ಮುಚ್ಚುವ ಕಾಮಗಾರಿ ನಡೆಸಿದೆ.

ಕೋರ್ಟು ರಸ್ತೆಯಲ್ಲಿ ರಸ್ತೆ ಬದಿ ಅಪಾಯಕಾರಿ ಗುಂಡಿ ನಿರ್ಮಾಣವಾಗಿ ಪಾದಾಚಾರಿಗಳಿಗೆ, ವಾಹನ ಚಾಲಕರಿಗೆ ಸಮಸ್ಯೆಯಾಗಿರುವ ಕುರಿತು ಈ ವಾರದ ‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಮ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗರ ಕಡೆ ಪ್ರತಿ ದಿನ ನೂರಾರು

ಸಂಖ್ಯೆಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆ ಬದಿ ನಿರ್ಮಾಣವಾದ ಈ ಗುಂಡಿ ಬಳಿ ಕಲ್ಲು ಇಟ್ಟಿರುವುದರಿಂದ ಎಲ್ಲರಿಗೂ ಗೊತ್ತಾಗಿದೆ. ಇಲ್ಲವಾದರೆ ಈ ಗುಂಡಿಗೆ ಯಾರಾದರೂ ಬಿದ್ದು ಹಾನಿ ಸಂಭವಿಸುವ ಸಾಧ್ಯತೆ ಇತ್ತು ಎಂದು ನ.ಪಂ ಮಾಜಿ ಹಿರಿಯ ಸದಸ್ಯ ಜಗದೀಶ್ ಡಿ ತಿಳಿಸಿದ್ದರು. ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ನಗರ ಪಂಚಾಯತು ಅಧಿಕಾರಿಗಳು ಈಗ ಗುಂಡಿಯನ್ನು ಮುಚ್ಚುವ ಕಾಮಗಾರಿಯನ್ನು ನಡೆಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
error: Content is protected !!