25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂ.19 ರಂದು ಯಕ್ಷಗಾನ ತರಗತಿ ಆರಂಭಗೊಂಡಿತು.

ಯಕ್ಷಗಾನ ಕಲಾವಿದ ಲಕ್ಷ್ಮಣಗೌಡ ಬೆಳಾಲು ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿ ಪ್ರಾರಂಭ ಮಾಡಿ, ಯಕ್ಷಗಾನ ಕಲೆ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇದರಿಂದ ಅನೇಕ ಮಂದಿ ಜೀವನ ಕಟ್ಟಿಕೊಂಡಿದ್ದಾರೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್ ಮಾತನಾಡಿ, ವಿದ್ಯಾರ್ಥಿಗಳು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಯೋಜಕರು, ಚಿತ್ರಕಲಾ ಅಧ್ಯಾಪಕರಾದ ಶ್ರೀರಾಮ್ ಮತ್ತು ಲಲಿತ ಎಂ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

50 ಮಂದಿ ವಿದ್ಯಾರ್ಥಿಗಳು ಯಕ್ಷಗಾನ ತರಗತಿಗೆ ಹಾಜರಾಗಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya
error: Content is protected !!