ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂ.19 ರಂದು ಯಕ್ಷಗಾನ ತರಗತಿ ಆರಂಭಗೊಂಡಿತು.
ಯಕ್ಷಗಾನ ಕಲಾವಿದ ಲಕ್ಷ್ಮಣಗೌಡ ಬೆಳಾಲು ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿ ಪ್ರಾರಂಭ ಮಾಡಿ, ಯಕ್ಷಗಾನ ಕಲೆ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇದರಿಂದ ಅನೇಕ ಮಂದಿ ಜೀವನ ಕಟ್ಟಿಕೊಂಡಿದ್ದಾರೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್ ಮಾತನಾಡಿ, ವಿದ್ಯಾರ್ಥಿಗಳು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಯೋಜಕರು, ಚಿತ್ರಕಲಾ ಅಧ್ಯಾಪಕರಾದ ಶ್ರೀರಾಮ್ ಮತ್ತು ಲಲಿತ ಎಂ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
50 ಮಂದಿ ವಿದ್ಯಾರ್ಥಿಗಳು ಯಕ್ಷಗಾನ ತರಗತಿಗೆ ಹಾಜರಾಗಿದ್ದರು.












