ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.)ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಸ್ವಾಗತ ಕಾರ್ಯಕ್ರಮವನ್ನು ಜೂ.19ರಂದು ರಂದು ಏರ್ಪಡಿಸಿದರು.
ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದ ಜೊತೆಗೂಡಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಚೈತನ್ಯ ಸ್ವಾಗತಿಸಿ , ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಅತ್ತಾವುಲ ವಂದಿಸಿ, ವಿದ್ಯಾರ್ಥಿ ಸಂಘದ ಉಪನಾಯಕಿ ಚೈತ್ರಾ ಹಾಗೂ ಫಾತಿಮತುಲ್ ತಸ್ಫಿಯಾ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿದರು .












