30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

ಉರುವಾಲು: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರ ಸಿ ಎಸ್ ಆರ್ ನಿಧಿಯಿಂದ, ಯೂತ್ ಪಾರ್ ಸೇವಾ ಸಂಸ್ಥೆ ಯವರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್, ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ತಫಾ ಮುರಿಯಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷರು ವಹಿಸಿಕೊಂಡರು. ಮುಖ್ಯ ಶಿಕ್ಷಕಿ ಗಿರಿಜಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟೆಕ್ಸಾಸ್ ಕಂಪನಿಯ ಪ್ರತಿನಿಧಿಗಳು ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಜೆ. ಕೆ. ಪೂಜಾರಿ, ನಿವೃತ್ತ ಮುಖ್ಯ ಗುರುಗಳಾದ ಧರ್ಣಪ್ಪ ನಾಯಕ್, ದಾನಿಗಳಾದ ಓಬಯ್ಯ ಪೂಜಾರಿ, ದಾಸಪ್ಪ ಗೌಡ ಕೋಡಿಯಡ್ಕ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಗೌರವ ಶಿಕ್ಷಕಿ ಸಂದೇಶ ಕುಮಾರಿ, ಎಸ್.ಡಿ.ಎಮ್.ಸಿ ಯ ಸದಸ್ಯರು, ಪೋಷಕರು, ಭಾಗವಹಿದ್ದರು. ಸಹಶಿಕ್ಷಕ ಪರಮೇಶ್ವರ್. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya
error: Content is protected !!