25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

ನಡ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ‘ಪ್ರತಿಜ್ಞಾ ವಿಧಿ ಸ್ವೀಕಾರ ’ ಸಮಾರಂಭವು ಜೂ.19 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್‌, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.


ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಅವರ ಜವಾಬ್ದಾರಿಯ ಕೀಲಿ ಕೈ ನೀಡುವುದರ ಮುಖಾಂತರ ವಿಶಿಷ್ಟವಾಗಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಅವರ ಜವಾಬ್ದಾರಿಯನ್ನು ಮತ್ತು ಶಾಲಾ ಬೆಳವಣಿಗೆಯಲ್ಲಿ ಅವರ ಪಾತ್ರವನ್ನು ಮನವರಿಕೆ ಮಾಡಿಸಿದರು.


2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಮೊಹಮ್ಮದ್ ಝಿಯಾದ್, ಶಿಸ್ತು ಮಂತ್ರಿಯಾಗಿ ಮಹಮ್ಮದ್ ಇನ್ಫಾಝ್, ಕ್ರೀಡಾ ಮಂತ್ರಿಯಾಗಿ ಯಜ್ಙೇಶ್, ಸ್ವಚ್ಛತಾ ಮಂತ್ರಿಯಾಗಿ ನಿಶಾನ್ , ಗ್ರಂಥಾಲಯದ ಮಂತ್ರಿಯಾಗಿ ಮಹಮ್ಮದ್ ತೌಶಿಕ್, ಸಾಂಸ್ಕೃತಿಕ ಮಂತ್ರಿಯಾಗಿ ಮಹಮ್ಮದ್ ಅನಾಸ್, ಶಿಕ್ಷಣ ಮಂತ್ರಿಯಾಗಿ ಅಪ್ಸಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಸಹಶಿಕ್ಷಕಿಯರಾದ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿ, ಮನಶಾಸ್ತ್ರಜ್ಞೆ ಆಶುರಾ ಫಾಯಿಝ ಅಥಿತಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶಿರಿನ್ ಭಾನು ವಂದಿಸಿದರು.

Related posts

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya
error: Content is protected !!