32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಜೂ. 21ರಂದು ರಾಷ್ಟ್ರಾದ್ಯಂತ ನಡೆಯುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ವ್ಯಾಪ್ತಿಯ 12 ಕೇಂದ್ರಗಳಲ್ಲಿ 5, 570 ಅಭ್ಯರ್ಥಿಗಳು ಹಾಜರಾಗುವರು.

ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಮಾತನಾಡಿ, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ಲೋಪವಾಗದಂತೆ ನಡೆಸಬೇಕು. ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು ಇರಲಿದ್ದು, ಅಭ್ಯರ್ಥಿಗಳ ತಪಾಸಣೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ತಪಾಸಣಾ ಸಾಮಾಗ್ರಿ ಹಾಗೂ ಅಗತ್ಯ ಸಿಬಂದಿ ಒದಗಿಸಿದೆ ಎಂದರು.

ಈ ಬಾರಿ ಪರೀಕ್ಷೆ ಬಿಗು ಭದ್ರತೆಯಿಂದ ನಡೆಸಲಾಗುತ್ತಿದ್ದು, ಸ್ಥಳೀಯ ಪೊಲೀಸ್ ರೊಂದಿಗೆ 30 ಮಂದಿಯ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮಂಗಳೂರಿಗೆ ಆಗಮಿಸಲಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ಪೊಲೀಸರನ್ನು ಸಶಸ್ತ್ರವಾಗಿ ನಿಯೋಜಿಸಲಾಗುವುದು. ಪರೀಕ್ಷಾ ಕಾರ್ಯಗಳ ಮೇಲ್ವಿಚಾರಣೆಗೆ ಎನ್‌ಟಿಎ ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ ಎಂದರು.

ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್‌ಫೋನ್, ಮೈಕ್ರೋ ಫೋನ್, ಬ್ಲೂಟೂತ್ ಸಾಧನ ಅನುಮತಿ ಇಲ್ಲ. ವಿದ್ಯಾರ್ಥಿ ಮತ್ತು ಪರೀಕ್ಷಾ ಸಿಬಂದಿಗೆ ಮೊಬೈಲ್ ಬಳಕೆ, ಫೋಟೋಗ್ರಫಿ ಸಂಪೂರ್ಣ ನಿಷೇಧಿಸಲಾಗಿದೆ. ಸಿಸಿಟಿವಿ ಕಾರ್ಯನಿರ್ವಹಣೆ ಬಗ್ಗೆ ಮುಂಚಿತವಾಗಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಬೆಳಗ್ಗೆ 11ರಿಂದ ಪರೀಕ್ಷಾ ಕೇಂದ್ರ ಪ್ರವೇಶ: ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ರವಿವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 1.30 ರವರೆಗೆ ಪ್ರವೇಶಿಸಬಹುದು. ಅಪರಾಹ್ನ 2 ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದ್ದು, ವಿಶೇಷಚೇತನರಿಗೆ ಹೆಚ್ಚುವರಿ 1 ಗಂಟೆ ಇರಲಿದೆ.ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ ನೀಡಲಾಗಿದೆ ಎಂದರು.

Related posts

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!