28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿ ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡಿದ್ದು, ಈ ಗುಂಡಿಯನ್ನು ನಗರ ಪಂಚಾಯತು ಮುಚ್ಚುವ ಕಾಮಗಾರಿ ನಡೆಸಿದೆ.

ಕೋರ್ಟು ರಸ್ತೆಯಲ್ಲಿ ರಸ್ತೆ ಬದಿ ಅಪಾಯಕಾರಿ ಗುಂಡಿ ನಿರ್ಮಾಣವಾಗಿ ಪಾದಾಚಾರಿಗಳಿಗೆ, ವಾಹನ ಚಾಲಕರಿಗೆ ಸಮಸ್ಯೆಯಾಗಿರುವ ಕುರಿತು ಈ ವಾರದ ‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಮ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗರ ಕಡೆ ಪ್ರತಿ ದಿನ ನೂರಾರು

ಸಂಖ್ಯೆಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆ ಬದಿ ನಿರ್ಮಾಣವಾದ ಈ ಗುಂಡಿ ಬಳಿ ಕಲ್ಲು ಇಟ್ಟಿರುವುದರಿಂದ ಎಲ್ಲರಿಗೂ ಗೊತ್ತಾಗಿದೆ. ಇಲ್ಲವಾದರೆ ಈ ಗುಂಡಿಗೆ ಯಾರಾದರೂ ಬಿದ್ದು ಹಾನಿ ಸಂಭವಿಸುವ ಸಾಧ್ಯತೆ ಇತ್ತು ಎಂದು ನ.ಪಂ ಮಾಜಿ ಹಿರಿಯ ಸದಸ್ಯ ಜಗದೀಶ್ ಡಿ ತಿಳಿಸಿದ್ದರು. ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ನಗರ ಪಂಚಾಯತು ಅಧಿಕಾರಿಗಳು ಈಗ ಗುಂಡಿಯನ್ನು ಮುಚ್ಚುವ ಕಾಮಗಾರಿಯನ್ನು ನಡೆಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya
error: Content is protected !!