25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

ನಡ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ‘ಪ್ರತಿಜ್ಞಾ ವಿಧಿ ಸ್ವೀಕಾರ ’ ಸಮಾರಂಭವು ಜೂ.19 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್‌, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.


ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಅವರ ಜವಾಬ್ದಾರಿಯ ಕೀಲಿ ಕೈ ನೀಡುವುದರ ಮುಖಾಂತರ ವಿಶಿಷ್ಟವಾಗಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಅವರ ಜವಾಬ್ದಾರಿಯನ್ನು ಮತ್ತು ಶಾಲಾ ಬೆಳವಣಿಗೆಯಲ್ಲಿ ಅವರ ಪಾತ್ರವನ್ನು ಮನವರಿಕೆ ಮಾಡಿಸಿದರು.


2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಮೊಹಮ್ಮದ್ ಝಿಯಾದ್, ಶಿಸ್ತು ಮಂತ್ರಿಯಾಗಿ ಮಹಮ್ಮದ್ ಇನ್ಫಾಝ್, ಕ್ರೀಡಾ ಮಂತ್ರಿಯಾಗಿ ಯಜ್ಙೇಶ್, ಸ್ವಚ್ಛತಾ ಮಂತ್ರಿಯಾಗಿ ನಿಶಾನ್ , ಗ್ರಂಥಾಲಯದ ಮಂತ್ರಿಯಾಗಿ ಮಹಮ್ಮದ್ ತೌಶಿಕ್, ಸಾಂಸ್ಕೃತಿಕ ಮಂತ್ರಿಯಾಗಿ ಮಹಮ್ಮದ್ ಅನಾಸ್, ಶಿಕ್ಷಣ ಮಂತ್ರಿಯಾಗಿ ಅಪ್ಸಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಸಹಶಿಕ್ಷಕಿಯರಾದ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿ, ಮನಶಾಸ್ತ್ರಜ್ಞೆ ಆಶುರಾ ಫಾಯಿಝ ಅಥಿತಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶಿರಿನ್ ಭಾನು ವಂದಿಸಿದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!