ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ನಿರ್ದೇಶನದಂತೆ ಜೂ.12 ರಿಂದ ಜೂ.26 ರವರೆಗಿನ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧಿ ನಿಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ರಾಯದಿಂದ ಪಾರ್ಪಿಕಲ್ಲು ವರೆಗಿನ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ಜೂ.20 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸಿಬ್ಬಂದಿಗಳೊಂದಿಗೆ ದಿಢೀರ್ ಭೇಟಿ ನೀಡಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಲಾಯಿತು.

ಗೂಡಂಗಡಿ ಮಾಲಿಕರಿಗೆ ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚಗಳ ಬಳಕೆಯ ಬದಲಾಗಿ ಹಾಳೆ ತಟ್ಟೆ, ಪೇಪರ್ ಲೋಟ, ಮರದ ಚಮಚಗಳನ್ನು ಉಪಯೋಗಿಸಲು ಸೂಚಿಸಲಾಯಿತು ಮತ್ತು ಮುಂದಿನ ದಿನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸುವುದು ಕಂಡು ಬಂದಲ್ಲಿ ದಂಡವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.












