28 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ , ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಪುರಂದರ ಬಜಿಲ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಸಾಕಾರ ರಾಜನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಮಾರಿದತ್ತನಾಗಿ ಚಂದ್ರಶೇಖರ ಧರ್ಮಸ್ಥಳ, ಪದ್ಮಿನಿಯಾಗಿ ಈಶ್ವರ ಪ್ರಸಾದ ಪಿವಿ, ಜಿನದತ್ತನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಪಾಚಕನಾಗಿ ಶಶಿಧರ ಕನ್ಯಾಡಿ, ಶ್ರೀಯಲೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸಿದ್ದಾಂತ ಕೀರ್ತಿ ಮುನಿಗಳಾಗಿ ಮಹಾವೀರ ಪಾಂಡಿ ಕಾಂತಾವರ ಪಾತ್ರ ನಿರ್ವಹಿಸಿದರು.
ತಾಳಮದ್ದಲೆಯನ್ನು ಪ್ರಾಯೋಜಿಸಿದ ಪದ್ಮಪ್ರಸಾದ್ ಜೈನ್ ಮತ್ತು ಅವರ ಶ್ರೀಮತಿ ಅವರನ್ನು ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯಕ್ಷಭಾರತಿಯ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya
error: Content is protected !!