31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇದರ ಮತದಾರರ ಸಾಕ್ಷರತಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ತು ಇದರ ಉದ್ಘಾಟನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವೇಣೂರು ಇದರ ಉಪ ಪ್ರಾಂಶುಪಾಲರಾದ ವೆಂಕಟೇಶ್ ಎಸ್ ತುಳುಪುಳೆ ವಹಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಪ್ರಾಂಶುಪಾಲರಾದ ಹಾಗೂ ವೇಣೂರು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾದ ಸುಕುಮಾರ್ ಜೈನ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗುರುಪ್ರಸಾದ್ ಉದ್ಯಮಿಗಳು ಮತ್ತು ಗುತ್ತಿಗೆದಾರರು ನಾರಾವಿ ಹಾಗೂ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಾಧ್ಯಕ್ಷರು ಎಸ್ ಡಿ ಎಂ ಸಿ ಪ್ರೌಢಶಾಲೆ ವೇಣೂರು ವಹಿಸಿದ್ದರು. ಎನ್ ಸಿ ಸಿ ಇದರ ಕಾರ್ಯಕ್ರಮದ ಅಧಿಕಾರಿಗಳಾದ ರವೀಂದ್ರ ಕೆ ಹಾಗೂ ಶಾಲಾ ನಾಯಕ ಎನ್ ನರಸಿಂಹ ಕಾಮತ್ ಮತ್ತು ಉಪನಾಯಕಿ ಬ್ರಾಹ್ಮಿ ವೇದಿಕೆಯಲ್ಲಿದ್ದರು.

ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಪ್ರೇಮ ಕೆ ವಂದಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಸುಶೀಲಾ .ಜಿ ನಿರ್ವಹಿಸಿದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!