32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜೀವನದ ಗುರಿ ನಿರ್ಧಾರ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಾಗಿಸಿದ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಹರೀಶ್ ನಂಬಿಯಾರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿ, ಅದನ್ನು ಸಾಧಿಸಲು ಸಮರ್ಪಣೆ ಹಾಗೂ ಸೂಕ್ತ ಯೋಜನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಮತ್ತೋರ್ವ ಉಪನ್ಯಾಸಕ ವರ್ಷಾ ಕಾಮತ್ ಅವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಲ್ಲಿ ಅನುಭವಾತ್ಮಕ ಕಲಿಕೆಯನ್ನು ಉತ್ತೇಜಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಗುರಿಮುಖಿ ಚಿಂತನೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದ ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳ ಜೀವನ ಹಾಗೂ ವೃತ್ತಿ ಕೌಶಲ್ಯಗಳನ್ನು ವೃದ್ಧಿಸುವ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವೈಬ್ರೆಂಟ್ ಕಾಲೇಜಿನ ಟ್ರಸ್ಟಿಗಳಾದ ಸುಭಾಷ್ ಝಾ, ಡಾ. ಶರತ್ ಗೋರೆ, ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್ ಹಾಗೂ ಯೋಗೇಶ್ ಬೆಡೆಕರ್ ಉಪಸ್ಥಿತರಿದ್ದರು.

Related posts

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದ ರಕ್ಷಾ ಬಂಧನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya
error: Content is protected !!