23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರಾಜಶ್ರೀ ಹಾಗೂ ದೈಹಿಕ ಶಿಕ್ಷಣ ಪರೀಕ್ಷಕರಾದ ಪ್ರಭಾಕರ್ ಭೇಟಿ ನೀಡಿ ಶಾಲೆಯ ವಿವಿಧ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ‘ಶ್ರೀ ಮಂಜುನಾಥ ದಳ’ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುವ ಪ್ರತಿಷ್ಠಿತ ಗೋಲ್ಡನ್ ಆ್ಯರೋ ಪ್ರಶಸ್ತಿ ಕುರಿತು ಪರಿಶೀಲನೆ ನಡೆಸಿ, ಶಾಲೆಯ ಯೋಗ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶೈಕ್ಷಣಿಕ ಫಲಿತಾಂಶಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಅಲ್ಲದೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಚಿರಾಗ್, ಅಹನ್ ಜೈನ್, ವಿಹಾನ್, ದೈವಿಕ್ ರೈ, ಆದ್ವಿ ಎಲ್. ರೈ ಹಾಗೂ ಯಕ್ಷಿತಾ ಅವರನ್ನು ರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶಾಲಾ ಶಿಕ್ಷಕಿ ಪ್ರಮೀಳ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್., ಚಿತ್ರಕಲಾ ಶಿಕ್ಷಕರಾದ ಜಯರಾಮ್ ಹಾಗೂ ಕನ್ನಡ ಶಿಕ್ಷಕರಾದ ಶ್ರೇಯಾಂಸ ಜೈನ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya
error: Content is protected !!