28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿ ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡಿದ್ದು, ಈ ಗುಂಡಿಯನ್ನು ನಗರ ಪಂಚಾಯತು ಮುಚ್ಚುವ ಕಾಮಗಾರಿ ನಡೆಸಿದೆ.

ಕೋರ್ಟು ರಸ್ತೆಯಲ್ಲಿ ರಸ್ತೆ ಬದಿ ಅಪಾಯಕಾರಿ ಗುಂಡಿ ನಿರ್ಮಾಣವಾಗಿ ಪಾದಾಚಾರಿಗಳಿಗೆ, ವಾಹನ ಚಾಲಕರಿಗೆ ಸಮಸ್ಯೆಯಾಗಿರುವ ಕುರಿತು ಈ ವಾರದ ‘ಸುದ್ದಿ ಉದಯ ಪತ್ರಿಕೆ’ಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಮ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗರ ಕಡೆ ಪ್ರತಿ ದಿನ ನೂರಾರು

ಸಂಖ್ಯೆಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆ ಬದಿ ನಿರ್ಮಾಣವಾದ ಈ ಗುಂಡಿ ಬಳಿ ಕಲ್ಲು ಇಟ್ಟಿರುವುದರಿಂದ ಎಲ್ಲರಿಗೂ ಗೊತ್ತಾಗಿದೆ. ಇಲ್ಲವಾದರೆ ಈ ಗುಂಡಿಗೆ ಯಾರಾದರೂ ಬಿದ್ದು ಹಾನಿ ಸಂಭವಿಸುವ ಸಾಧ್ಯತೆ ಇತ್ತು ಎಂದು ನ.ಪಂ ಮಾಜಿ ಹಿರಿಯ ಸದಸ್ಯ ಜಗದೀಶ್ ಡಿ ತಿಳಿಸಿದ್ದರು. ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ನಗರ ಪಂಚಾಯತು ಅಧಿಕಾರಿಗಳು ಈಗ ಗುಂಡಿಯನ್ನು ಮುಚ್ಚುವ ಕಾಮಗಾರಿಯನ್ನು ನಡೆಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya
error: Content is protected !!