August 9, 2026
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಪ ಪೂ.ಕಾಲೇಜು: ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ 12ನೇ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು . ಕಾರ್ಯಕ್ರಮವನ್ನು ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡುವುದರಿಂದ ಏಕಾಗ್ರತೆ ಮೂಡಿಸಿ ಓದಿನಲ್ಲೂ ಯಶಸ್ವಿಯಾಗಲು ಸಾಧ್ಯ. ಜೊತೆಗೆ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ರವರು ಮಾತನಾಡಿ ” ಯೋಗ ದಿನ ಯೋಗದ ಮಹತ್ವ ತಿಳಿಸುವ ದಿನ ಮಾತ್ರ. ಪ್ರತಿ ನಿತ್ಯ ಯೋಗ ಮಾಡಿದಾಗ ಅದರ ನಿಜವಾದ ಮಹತ್ವದ ಅನುಭವ ಆಗಲು ಸಾಧ್ಯ. ಏಕೆಂದರೆ ಅರೋಗ್ಯವಂತ ಜೀವನಕ್ಕೆ ಯೋಗ ಅತ್ಯಮೂಲ್ಯವಾದುದು.” ಎಂದು ಹೇಳಿದರು.
ಸ್ವಯಂ ಸೇವಕ ಸಾಕೇತ್ ಯೋಗ ದಿನದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು.

ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಡಾ. ಅತುಲಾ, ಡಾ. ಶಿವರಾಜ್, ಡಾ. ವಿವೇಕ್ ಸ್ವಯಂ ಸೇವಕರಿಗೆ ಯೋಗ ಶಿಬಿರ ನಡೆಸಿಕೊಟ್ಟರು. ಸ್ವಯಂ ಸೇವಕಿಯರಾದ ಸುಪೇಕ್ಷಾ ನಿರೂಪಿಸಿ ಶ್ರೇಯ ಸ್ವಾಗತಿಸಿ ಅನ್ವಿತಾ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya
error: Content is protected !!