August 9, 2026
ಆರೋಗ್ಯಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ಇದರ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯಕ್ರಮದಂತೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆರಂಭದಲ್ಲಿ ಎಸ್ ಪಿ ವೈ ಎಸ್ ಎಸ್ ನ ನಿತ್ಯ ಅಭ್ಯಾಸದಂತೆ ಪ್ರದೀಪ್ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ಬಳಿಕ ಪಾಂಡುರಂಗ ಶಾಖೆಯ ಯೋಗೀಶ್ ಅಮೃತವಚನ, ನಮ್ಮಮನೆ ಶಾಖೆಯ ಸೌಮ್ಯ ಪಂಚಾಂಗ ಪಠಣವನ್ನು ನಡೆಸಿಕೊಟ್ಟರು.

ಮಾನಸಿಕ ಸಿದ್ಧತೆಯನ್ನು ಯಶನ್ ಉಪ್ಪಿನಂಗಡಿ ಶಾಖೆ ಹಾಗೂ ಪ್ರಾತ್ಯಕ್ಷಿಕೆಯನ್ನು ಶಶಿ ಮತ್ತು ಹರೀಶ ಗಾಣಿಗ ಸಭಾಭವನ ಶಾಖೆ ಉಪ್ಪಿನಂಗಡಿ ಇವರು ನಡೆಸಿಕೊಟ್ಟರು. ಬಳಿಕ ಆಯುಷ್ ಪಠ್ಯಕ್ರಮದ ಯೋಗಭ್ಯಾಸದ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ದುರ್ಗಾಗಣೇಶ ಸಭಾಭವನದ ಅಧ್ಯಕ್ಷ ರೋಹಿತ್ ಶೆಟ್ಟಿ ನೆರವೇರಿಸಿದರು. ಭಜನಾ ಮಂಡಳಿಯ ಸದಸ್ಯ ಚಿದಾನಂದ ನಾಯ್ಕ ಹಾಗೂ ಸಮಿತಿಯ ಹಿರಿಯ ಯೋಗ ಬಂಧುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಯಮಿ ಕಿರಣ್ ಚಂದ್ರ ಶುಭಹಾರೈಸಿದರು. ಶಿಕ್ಷಕ ಪ್ರದೀಪ್, ಮಂಗಳೂರು ನಗರ ಸಂಚಾಲಕ ಆನಂದ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಯೋಗ ದಿನಾಚರಣೆಯ ಬಗ್ಗೆ ಬೌದ್ಧಿಕ್ ಅನ್ನು ಡಾ.ಅನಿಶ್ ಶಿಕ್ಷಕರು, ಶಬರೀಶ ಶಾಖೆ ನೆಲ್ಯಾಡಿ ಇವರು ನೀಡಿದರು.

ನಂತರ ಆಯುಷ್ ಪಠ್ಯಕ್ರಮದ ಯೋಗಾಭ್ಯಾಸದ ವಿವರಣೆಯನ್ನು ಗುರುವಾಯನಕೆರೆ ನಮ್ಮ ಮನೆ ಶಾಖೆಯ ಸಂಚಾಲಕಿ ಸುಮಲತಾ ನೀಡಿದರು. ಪಾಂಡುರಂಗ ಶಾಖೆಯ ಉಷಾ ಹಾಗೂ ಮದ್ದಡ್ಕ ಶಾಖೆಯ ಸುಬ್ರಹ್ಮಣ್ಯ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಬಳಿಕ ಸಾಮೂಹಿಕವಾಗಿ ಪತಂಜಲಿ ಗುರುಗಳಿಗೆ ಯೋಗ ನಮನ ಸಲ್ಲಿಸಲಾಯಿತು. ಜ್ಯೋತಿರ್ ಮಂತ್ರ, ಐಕ್ಯ ಮಂತ್ರ ಪಠಿಸಲಾಯಿತು. ದಮಯಂತಿ ವಂದನಾರ್ಪಣೆ ಸಲ್ಲಿಸಿದರು. ಮದ್ದಡ್ಕ ಶಾಖೆಯ ವತ್ಸಲ ಎಂ.ಭಟ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕೂ ಮಿಕ್ಕಿ ಯೋಗ ಬಂಧುಗಳು ಭಾಗವಹಿಸಿದರು. ಉಪ್ಪಿನಂಗಡಿ ನಗರದ ಎಲ್ಲಾ ಶಾಖೆಯ ಯೋಗ ಮತ್ತು ಯೋಗೇತರ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya
error: Content is protected !!