26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

ಬೆಳ್ತಂಗಡಿ: 2025-26ನೇ ಸಾಲಿನಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ತಂಡ, ರೂ. 3.1 ಕೋಟಿ ವೆಚ್ಚದಲ್ಲಿ ನಡೆಸಿದ 492 ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ, ಜೂ. 20ರಂದು ಮೈಸೂರಿನ ಮೈಸೂರು ಯುನಿಯನ್ ನಲ್ಲಿ ನಡೆದ “ಅನುಬಂಧ ಪ್ರಶಸ್ತಿ ಪ್ರಧಾನ” ಸಮಾರಂಭದಲ್ಲಿ, ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ನೇತೃತ್ವದ ತಂಡವನ್ನು, ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ ಪ್ರಶಸ್ತಿಯಾದ “ಡೈಮಂಡ್ ಪ್ಲಸ್” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಜತೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಅಡಿಯಲ್ಲಿ ಬರುವ ಎಲ್ಲಾ ರೋಟರಿ ಕ್ಲಬ್ ಗಳಿಗಿಂತಲೂ ಅತ್ಯಧಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿರುವುದಕ್ಕೆ ಪ್ರಥಮ ಬಹುಮಾನ, IMPACT EXCELLENCE ಪ್ರಶಸ್ತಿ ಮತ್ತು ENGAGEMENT EXCELLENCE ಪ್ರಶಸ್ತಿ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನ ಸದಸ್ಯ ಹಾಗೂ ಎಕ್ಸ್ ಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ರೊ. ಪಿ ಎಚ್ ಎಫ್ ಸುಮಂತ ಕುಮಾರ್ ಜೈನ್ ರವರಿಗೆ UNSUNG HERO ಪ್ಪಶಸ್ತಿ, ರೊ. ಮನೋರಮ ಭಟ್ ಅವರಿಗೆ CITATION FOR WOMEN EMPOWERMENT LEADERSHIP ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಕಾರ್ಯಕ್ರಮದಲ್ಲಿ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ ಎಂ ಎಂ ದಯಾಕರ್, ರೊ. ಡಾ. ಎ. ಜಯಕುಮಾರ್ ಶೆಟ್ಟಿ, ರೊ ಡಾ. ಶಶಿಧರ್ ಡೋಂಗ್ರೆ, ರೊ ಶ್ರೀಧರ ಕೆ ವಿ, ರೊ. ಡಾ ರಾಘವೇಂದ್ರ ಪಿದಮಲೆ, ರೊ ಅರುಣ ಕುಮಾರ್, ರೊ ಬಿ. ಸೋಮಶೇಖರ ಶೆಟ್ಟಿ ಮತ್ತು ಆ್ಯನ್ ಗೀತಾ ಪ್ರಕಾಶ ಪ್ರಭು ಭಾಗವಹಿಸಿದರು.

Related posts

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!