30.6 C
ಪುತ್ತೂರು, ಬೆಳ್ತಂಗಡಿ
June 21, 2026
ಅಭಿನಂದನೆಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

ಬೆಳ್ತಂಗಡಿ: 2025-26ನೇ ಸಾಲಿನಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ತಂಡ, ರೂ. 3.1 ಕೋಟಿ ವೆಚ್ಚದಲ್ಲಿ ನಡೆಸಿದ 492 ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ, ಜೂ. 20ರಂದು ಮೈಸೂರಿನ ಮೈಸೂರು ಯುನಿಯನ್ ನಲ್ಲಿ ನಡೆದ “ಅನುಬಂಧ ಪ್ರಶಸ್ತಿ ಪ್ರಧಾನ” ಸಮಾರಂಭದಲ್ಲಿ, ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ನೇತೃತ್ವದ ತಂಡವನ್ನು, ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ ಪ್ರಶಸ್ತಿಯಾದ “ಡೈಮಂಡ್ ಪ್ಲಸ್” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಜತೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಅಡಿಯಲ್ಲಿ ಬರುವ ಎಲ್ಲಾ ರೋಟರಿ ಕ್ಲಬ್ ಗಳಿಗಿಂತಲೂ ಅತ್ಯಧಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿರುವುದಕ್ಕೆ ಪ್ರಥಮ ಬಹುಮಾನ, IMPACT EXCELLENCE ಪ್ರಶಸ್ತಿ ಮತ್ತು ENGAGEMENT EXCELLENCE ಪ್ರಶಸ್ತಿ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನ ಸದಸ್ಯ ಹಾಗೂ ಎಕ್ಸ್ ಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ರೊ. ಪಿ ಎಚ್ ಎಫ್ ಸುಮಂತ ಕುಮಾರ್ ಜೈನ್ ರವರಿಗೆ UNSUNG HERO ಪ್ಪಶಸ್ತಿ, ರೊ. ಮನೋರಮ ಭಟ್ ಅವರಿಗೆ CITATION FOR WOMEN EMPOWERMENT LEADERSHIP ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಕಾರ್ಯಕ್ರಮದಲ್ಲಿ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ ಎಂ ಎಂ ದಯಾಕರ್, ರೊ. ಡಾ. ಎ. ಜಯಕುಮಾರ್ ಶೆಟ್ಟಿ, ರೊ ಡಾ. ಶಶಿಧರ್ ಡೋಂಗ್ರೆ, ರೊ ಶ್ರೀಧರ ಕೆ ವಿ, ರೊ. ಡಾ ರಾಘವೇಂದ್ರ ಪಿದಮಲೆ, ರೊ ಅರುಣ ಕುಮಾರ್, ರೊ ಬಿ. ಸೋಮಶೇಖರ ಶೆಟ್ಟಿ ಮತ್ತು ಆ್ಯನ್ ಗೀತಾ ಪ್ರಕಾಶ ಪ್ರಭು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!