26.5 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿಬೆಳ್ತಂಗಡಿ

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

ಬೆಳ್ತಂಗಡಿ: ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆಯು ಜೂ.21 ರಂದು ನಡೆಯಿತು.

ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.

ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ದೀಪಕ್ ಜಿ., ಕಿರಣ್, ಸಂತೋಷ್, ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!