28.2 C
ಪುತ್ತೂರು, ಬೆಳ್ತಂಗಡಿ
June 21, 2026
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಪ ಪೂ.ಕಾಲೇಜು: ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ 12ನೇ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು . ಕಾರ್ಯಕ್ರಮವನ್ನು ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡುವುದರಿಂದ ಏಕಾಗ್ರತೆ ಮೂಡಿಸಿ ಓದಿನಲ್ಲೂ ಯಶಸ್ವಿಯಾಗಲು ಸಾಧ್ಯ. ಜೊತೆಗೆ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ರವರು ಮಾತನಾಡಿ ” ಯೋಗ ದಿನ ಯೋಗದ ಮಹತ್ವ ತಿಳಿಸುವ ದಿನ ಮಾತ್ರ. ಪ್ರತಿ ನಿತ್ಯ ಯೋಗ ಮಾಡಿದಾಗ ಅದರ ನಿಜವಾದ ಮಹತ್ವದ ಅನುಭವ ಆಗಲು ಸಾಧ್ಯ. ಏಕೆಂದರೆ ಅರೋಗ್ಯವಂತ ಜೀವನಕ್ಕೆ ಯೋಗ ಅತ್ಯಮೂಲ್ಯವಾದುದು.” ಎಂದು ಹೇಳಿದರು.
ಸ್ವಯಂ ಸೇವಕ ಸಾಕೇತ್ ಯೋಗ ದಿನದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು.

ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಡಾ. ಅತುಲಾ, ಡಾ. ಶಿವರಾಜ್, ಡಾ. ವಿವೇಕ್ ಸ್ವಯಂ ಸೇವಕರಿಗೆ ಯೋಗ ಶಿಬಿರ ನಡೆಸಿಕೊಟ್ಟರು. ಸ್ವಯಂ ಸೇವಕಿಯರಾದ ಸುಪೇಕ್ಷಾ ನಿರೂಪಿಸಿ ಶ್ರೇಯ ಸ್ವಾಗತಿಸಿ ಅನ್ವಿತಾ ವಂದಿಸಿದರು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ವಿದ್ವತ್ ಪ್ರತಿಭಾನ್ವೇಷಣೆ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸ್ಪಂದನೆ-ವೃತ್ತಿ ಮಾರ್ಗದರ್ಶನದ ಕುರಿತು ಪೋಷಕರಿಗೂ ಮಾಹಿತಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!