August 9, 2026
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಪ ಪೂ.ಕಾಲೇಜು: ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ 12ನೇ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು . ಕಾರ್ಯಕ್ರಮವನ್ನು ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡುವುದರಿಂದ ಏಕಾಗ್ರತೆ ಮೂಡಿಸಿ ಓದಿನಲ್ಲೂ ಯಶಸ್ವಿಯಾಗಲು ಸಾಧ್ಯ. ಜೊತೆಗೆ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ರವರು ಮಾತನಾಡಿ ” ಯೋಗ ದಿನ ಯೋಗದ ಮಹತ್ವ ತಿಳಿಸುವ ದಿನ ಮಾತ್ರ. ಪ್ರತಿ ನಿತ್ಯ ಯೋಗ ಮಾಡಿದಾಗ ಅದರ ನಿಜವಾದ ಮಹತ್ವದ ಅನುಭವ ಆಗಲು ಸಾಧ್ಯ. ಏಕೆಂದರೆ ಅರೋಗ್ಯವಂತ ಜೀವನಕ್ಕೆ ಯೋಗ ಅತ್ಯಮೂಲ್ಯವಾದುದು.” ಎಂದು ಹೇಳಿದರು.
ಸ್ವಯಂ ಸೇವಕ ಸಾಕೇತ್ ಯೋಗ ದಿನದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು.

ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಡಾ. ಅತುಲಾ, ಡಾ. ಶಿವರಾಜ್, ಡಾ. ವಿವೇಕ್ ಸ್ವಯಂ ಸೇವಕರಿಗೆ ಯೋಗ ಶಿಬಿರ ನಡೆಸಿಕೊಟ್ಟರು. ಸ್ವಯಂ ಸೇವಕಿಯರಾದ ಸುಪೇಕ್ಷಾ ನಿರೂಪಿಸಿ ಶ್ರೇಯ ಸ್ವಾಗತಿಸಿ ಅನ್ವಿತಾ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.94 ಫಲಿತಾಂಶ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya
error: Content is protected !!