24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಜೂ. 20ರಂದು ನಡೆದಿದೆ.

ಮನೆಯಲ್ಲಿ ಒಟ್ಟು ನಾಲ್ಕು ಮಂದಿ ಇದ್ದು ಶ್ರೀಧರ ಅವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.ಇತರರು ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ಹಂಚು ತೆಗೆದು ಒಳನುಗ್ಗಿದ್ದು ಮನೆಯಲ್ಲಿ ಇದ್ದ ಕಪಾಟಿನ ಬೀಗ ಮುರಿದು ಸುಮಾರು 10 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವುದಾಗಿ ತಿಳಿದು ಬಂದಿದೆ.

ಚಾವಣಿಯ ಹಂಚು ತೆಗೆದು ಒಳ ನುಗ್ಗಿದ ಕಳ್ಳರು ಬಳಿಕ ಹಂಚನ್ನು ಹಾಗೆ ಇಟ್ಟು ಹಿಂಭಾಗಲಿನ ಮೂಲಕ ಪರಾರಿಯಾಗಿದ್ದಾರೆ. ಶ್ರೀಧರ ಅವರ ಮನೆ ಉಜಿರೆ-ಗುರಿಪಳ್ಳ ರಸ್ತೆಯ ಬದಿಯಲ್ಲೇ ಇದ್ದು ಇಲ್ಲಿ ಜನ- ವಾಹನ ಓಡಾಟವಿದ್ದರೂ ಹಾಡುಹಗಲೇ ಕಳ್ಳತನ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya
error: Content is protected !!