28 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

ಬೆಳ್ತಂಗಡಿ: 2025-26ನೇ ಸಾಲಿನಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ತಂಡ, ರೂ. 3.1 ಕೋಟಿ ವೆಚ್ಚದಲ್ಲಿ ನಡೆಸಿದ 492 ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ, ಜೂ. 20ರಂದು ಮೈಸೂರಿನ ಮೈಸೂರು ಯುನಿಯನ್ ನಲ್ಲಿ ನಡೆದ “ಅನುಬಂಧ ಪ್ರಶಸ್ತಿ ಪ್ರಧಾನ” ಸಮಾರಂಭದಲ್ಲಿ, ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ನೇತೃತ್ವದ ತಂಡವನ್ನು, ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ ಪ್ರಶಸ್ತಿಯಾದ “ಡೈಮಂಡ್ ಪ್ಲಸ್” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಜತೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಅಡಿಯಲ್ಲಿ ಬರುವ ಎಲ್ಲಾ ರೋಟರಿ ಕ್ಲಬ್ ಗಳಿಗಿಂತಲೂ ಅತ್ಯಧಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿರುವುದಕ್ಕೆ ಪ್ರಥಮ ಬಹುಮಾನ, IMPACT EXCELLENCE ಪ್ರಶಸ್ತಿ ಮತ್ತು ENGAGEMENT EXCELLENCE ಪ್ರಶಸ್ತಿ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನ ಸದಸ್ಯ ಹಾಗೂ ಎಕ್ಸ್ ಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ರೊ. ಪಿ ಎಚ್ ಎಫ್ ಸುಮಂತ ಕುಮಾರ್ ಜೈನ್ ರವರಿಗೆ UNSUNG HERO ಪ್ಪಶಸ್ತಿ, ರೊ. ಮನೋರಮ ಭಟ್ ಅವರಿಗೆ CITATION FOR WOMEN EMPOWERMENT LEADERSHIP ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಕಾರ್ಯಕ್ರಮದಲ್ಲಿ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ ಎಂ ಎಂ ದಯಾಕರ್, ರೊ. ಡಾ. ಎ. ಜಯಕುಮಾರ್ ಶೆಟ್ಟಿ, ರೊ ಡಾ. ಶಶಿಧರ್ ಡೋಂಗ್ರೆ, ರೊ ಶ್ರೀಧರ ಕೆ ವಿ, ರೊ. ಡಾ ರಾಘವೇಂದ್ರ ಪಿದಮಲೆ, ರೊ ಅರುಣ ಕುಮಾರ್, ರೊ ಬಿ. ಸೋಮಶೇಖರ ಶೆಟ್ಟಿ ಮತ್ತು ಆ್ಯನ್ ಗೀತಾ ಪ್ರಕಾಶ ಪ್ರಭು ಭಾಗವಹಿಸಿದರು.

Related posts

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!