
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ರೆಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಕೆ ಇವರು ಇಂದಿನ ಆಧುನಿಕ ಜೀವನ ಜಗತ್ತಿನಲ್ಲಿ ಯೋಗ ಅತ್ಯವಶ್ಯಕವಾಗಿದೆ. ಇದು ಮನುಷ್ಯನ ದೈಹಿಕ ಆರೋಗ್ಯಕ್ಕೆ ಅಷ್ಟೇ ಅಲ್ಲದೆ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಕಾರಿ ಹಾಗಾಗಿ ವಿದ್ಯಾರ್ಥಿಗಳು ತಮ್ಮ ಜೀವನದ ದಿನದ ಅರ್ಧ ಗಂಟೆ ಯೋಗಾಸನಕ್ಕಾಗಿ ಮೀಸಲಿಡಬೇಕು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಎನ್., ಯೋಗಾಸನ ಮತ್ತು ಪ್ರಾಣಯಾಮಗಳ ಪ್ರಾತ್ಯಕ್ಷಿ ಕತೆ ಮತ್ತು ಅದರ ವಿವರಣೆಗಳು ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ನಿರ್ವಹಣೆ ಮಾಡಿದ ಅಂತಿಮ ಎಂಕಾಂ ವಿದ್ಯಾರ್ಥಿ ಶಮೀರ್ ಇವರು ಯೋಗ ದಿನಾಚರಣೆಯ ಆಚರಣೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್ಎಸ್ ಹಾಗೂ ಉಪನ್ಯಾಸಕರಾದ ಡಾ. ಶೀಲಾವತಿ ಮತ್ತು ಸುನಿತಾ ಇವರು ಉಪಸ್ಥಿತರಿದ್ದರು













