28 C
ಪುತ್ತೂರು, ಬೆಳ್ತಂಗಡಿ
August 5, 2026
ಪ್ರಮುಖ ಸುದ್ದಿಬೆಳ್ತಂಗಡಿ

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

ಬೆಳ್ತಂಗಡಿ: ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆಯು ಜೂ.21 ರಂದು ನಡೆಯಿತು.

ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.

ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ದೀಪಕ್ ಜಿ., ಕಿರಣ್, ಸಂತೋಷ್, ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
error: Content is protected !!