25.3 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

ಉಜಿರೆ: ಗ್ರಾಮೀಣ ಸಮುದಾಯಗಳಿಗೆ ಆರ್ಥಿಕ ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು (FLC-CRP) ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ (NRLM) ವಿಭಾಗದ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹರಿಪ್ರಸಾದ್ ಅವರು ಹೇಳಿದರು.ಅವರು ರುಡ್‌ಸೆಟ್ ಸಂಸ್ಥೆ ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಹಣಕಾಸು ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (FLC-CRP) ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ತರಬೇತಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನೀಲ್ ನಾಯಕ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ವ್ಯವಸ್ಥಾಪಕ ಶಕುಂತಲಾ ತರಬೇತಿದಾರರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಕೆಲವು ಶಿಬಿರಾರ್ಥಿಗಳು ತಮ್ಮ ಕಲಿಕೆಯ ಅನುಭವಗಳನ್ನು ಹಂಚಿಕೊಂಡು, ಗುಣಮಟ್ಟದ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ರುಡ್‌ಸೆಟ್ ಸಂಸ್ಥೆ ಹಾಗೂ ಎನ್‌ಆರ್‌ಎಲ್‌ಎಂ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕರುಣಾಕರ್ ಕೆ. ಜೈನ್ ಅವರು ಕಾರ್ಯಕ್ರಮ ನಿರೂಪಿಸಿ,ಸಿದರು. ಸುಳ್ಯ ತಾಲೂಕು ಪಂಚಾಯತ್‌ನ ಎನ್‌ಆರ್‌ಎಲ್‌ಎಂ ತಾಲೂಕು ಯೋಜನಾ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ ಧನ್ಯವಾದ ಸಮರ್ಪಿಸಿದರು.

Related posts

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!