25.3 C
ಪುತ್ತೂರು, ಬೆಳ್ತಂಗಡಿ
June 22, 2026
ಆರೋಗ್ಯಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ಇದರ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯಕ್ರಮದಂತೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆರಂಭದಲ್ಲಿ ಎಸ್ ಪಿ ವೈ ಎಸ್ ಎಸ್ ನ ನಿತ್ಯ ಅಭ್ಯಾಸದಂತೆ ಪ್ರದೀಪ್ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ಬಳಿಕ ಪಾಂಡುರಂಗ ಶಾಖೆಯ ಯೋಗೀಶ್ ಅಮೃತವಚನ, ನಮ್ಮಮನೆ ಶಾಖೆಯ ಸೌಮ್ಯ ಪಂಚಾಂಗ ಪಠಣವನ್ನು ನಡೆಸಿಕೊಟ್ಟರು.

ಮಾನಸಿಕ ಸಿದ್ಧತೆಯನ್ನು ಯಶನ್ ಉಪ್ಪಿನಂಗಡಿ ಶಾಖೆ ಹಾಗೂ ಪ್ರಾತ್ಯಕ್ಷಿಕೆಯನ್ನು ಶಶಿ ಮತ್ತು ಹರೀಶ ಗಾಣಿಗ ಸಭಾಭವನ ಶಾಖೆ ಉಪ್ಪಿನಂಗಡಿ ಇವರು ನಡೆಸಿಕೊಟ್ಟರು. ಬಳಿಕ ಆಯುಷ್ ಪಠ್ಯಕ್ರಮದ ಯೋಗಭ್ಯಾಸದ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ದುರ್ಗಾಗಣೇಶ ಸಭಾಭವನದ ಅಧ್ಯಕ್ಷ ರೋಹಿತ್ ಶೆಟ್ಟಿ ನೆರವೇರಿಸಿದರು. ಭಜನಾ ಮಂಡಳಿಯ ಸದಸ್ಯ ಚಿದಾನಂದ ನಾಯ್ಕ ಹಾಗೂ ಸಮಿತಿಯ ಹಿರಿಯ ಯೋಗ ಬಂಧುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಯಮಿ ಕಿರಣ್ ಚಂದ್ರ ಶುಭಹಾರೈಸಿದರು. ಶಿಕ್ಷಕ ಪ್ರದೀಪ್, ಮಂಗಳೂರು ನಗರ ಸಂಚಾಲಕ ಆನಂದ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಯೋಗ ದಿನಾಚರಣೆಯ ಬಗ್ಗೆ ಬೌದ್ಧಿಕ್ ಅನ್ನು ಡಾ.ಅನಿಶ್ ಶಿಕ್ಷಕರು, ಶಬರೀಶ ಶಾಖೆ ನೆಲ್ಯಾಡಿ ಇವರು ನೀಡಿದರು.

ನಂತರ ಆಯುಷ್ ಪಠ್ಯಕ್ರಮದ ಯೋಗಾಭ್ಯಾಸದ ವಿವರಣೆಯನ್ನು ಗುರುವಾಯನಕೆರೆ ನಮ್ಮ ಮನೆ ಶಾಖೆಯ ಸಂಚಾಲಕಿ ಸುಮಲತಾ ನೀಡಿದರು. ಪಾಂಡುರಂಗ ಶಾಖೆಯ ಉಷಾ ಹಾಗೂ ಮದ್ದಡ್ಕ ಶಾಖೆಯ ಸುಬ್ರಹ್ಮಣ್ಯ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಬಳಿಕ ಸಾಮೂಹಿಕವಾಗಿ ಪತಂಜಲಿ ಗುರುಗಳಿಗೆ ಯೋಗ ನಮನ ಸಲ್ಲಿಸಲಾಯಿತು. ಜ್ಯೋತಿರ್ ಮಂತ್ರ, ಐಕ್ಯ ಮಂತ್ರ ಪಠಿಸಲಾಯಿತು. ದಮಯಂತಿ ವಂದನಾರ್ಪಣೆ ಸಲ್ಲಿಸಿದರು. ಮದ್ದಡ್ಕ ಶಾಖೆಯ ವತ್ಸಲ ಎಂ.ಭಟ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕೂ ಮಿಕ್ಕಿ ಯೋಗ ಬಂಧುಗಳು ಭಾಗವಹಿಸಿದರು. ಉಪ್ಪಿನಂಗಡಿ ನಗರದ ಎಲ್ಲಾ ಶಾಖೆಯ ಯೋಗ ಮತ್ತು ಯೋಗೇತರ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya
error: Content is protected !!