28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಜೂ. 20ರಂದು ನಡೆದಿದೆ.

ಮನೆಯಲ್ಲಿ ಒಟ್ಟು ನಾಲ್ಕು ಮಂದಿ ಇದ್ದು ಶ್ರೀಧರ ಅವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.ಇತರರು ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ಹಂಚು ತೆಗೆದು ಒಳನುಗ್ಗಿದ್ದು ಮನೆಯಲ್ಲಿ ಇದ್ದ ಕಪಾಟಿನ ಬೀಗ ಮುರಿದು ಸುಮಾರು 10 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವುದಾಗಿ ತಿಳಿದು ಬಂದಿದೆ.

ಚಾವಣಿಯ ಹಂಚು ತೆಗೆದು ಒಳ ನುಗ್ಗಿದ ಕಳ್ಳರು ಬಳಿಕ ಹಂಚನ್ನು ಹಾಗೆ ಇಟ್ಟು ಹಿಂಭಾಗಲಿನ ಮೂಲಕ ಪರಾರಿಯಾಗಿದ್ದಾರೆ. ಶ್ರೀಧರ ಅವರ ಮನೆ ಉಜಿರೆ-ಗುರಿಪಳ್ಳ ರಸ್ತೆಯ ಬದಿಯಲ್ಲೇ ಇದ್ದು ಇಲ್ಲಿ ಜನ- ವಾಹನ ಓಡಾಟವಿದ್ದರೂ ಹಾಡುಹಗಲೇ ಕಳ್ಳತನ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
error: Content is protected !!