August 9, 2026
ಆರೋಗ್ಯಚಿತ್ರ ವರದಿತಾಲೂಕು ಸುದ್ದಿ

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

ಧಮ೯ಸ್ಥಳ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ಆಸ್ಪತ್ರೆಗಳು ಇದರ ಆಶ್ರಯದಲ್ಲಿ
12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2026 ಜೂ.21ರಂದು ‘ಅಮೃತವರ್ಷಿಣಿ’ ಸಭಾಭವನ ಧರ್ಮಸ್ಥಳದಲ್ಲಿ
ಜರುಗಿತು.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ, ಉಜಿರೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಉಪಕುಲಪತಿಗಳಾದ ಡಾ. ಭಗವಾನ್ ಬಿ. ಸಿ. ಕಾಯ೯ಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ಭಾಗವಹಿಸಿದ್ದರು.
ವಿಶೇಷ ಆಹ್ವಾನಿತರಾಗಿ ಡಾ. ಷಣ್ಮುಖಪ್ಪ ಪ್ರಭಾರ ನಿರ್ದೇಶಕರು, ಪಠ್ಯಕ್ರಮ ಅಭಿವೃದ್ಧಿ ಕೇಂದ್ರ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಬೆಂಗಳೂರು, ಡಿ. ಸುರೇಂದ್ರ ಕುಮಾರ್ – ಉಪಾಧ್ಯಕ್ಷರು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಜಿರೆ, ಡಾ. ಸತೀಶ್ಚಂದ್ರ ಎಸ್. ಕಾರ್ಯದರ್ಶಿಗಳು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಜಿರೆ, ಡಿ. ಹರ್ಷೇಂದ್ರ ಕುಮಾರ್ ಕಾರ್ಯದರ್ಶಿಗಳು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಜಿರೆ ಉಪಸ್ಥಿತರಿದ್ದರು.

ಕಾಯ೯ಕ್ರಮದಲ್ಲಿ ಡಾ. ಶಿವಪ್ರಸಾದ್ ಶೆಟ್ಟಿ ಮುಖ್ಯವೈದ್ಯಾಧಿಕಾರಿಗಳು ಶಾಂತಿವನ, ಡಾ. ಪ್ರಶಾಂತ್ ಶೆಟ್ಟಿ ಪ್ರಾಂಶುಪಾಲರು, ಡಾ. ಐ. ಶಶಿಕಾಂತ್ ಜೈನ್ ನಿರ್ದೇಶಕರು ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ, ಪ್ರಾಣಾಯಾಮ, ಧ್ಯಾನ, ನಡೆಯಿತು.
ಭಾಷಿಣಿ ಮತ್ತು ತಂಡದವರ ಪ್ರಾಥ೯ನೆ ಬಳಿಕ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಡಾ.‌ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲ ಡಾ. ಸುಜಾತಾ ಕೆ.ಜೆ ವಂದಿಸಿದರು.

Related posts

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!