25.1 C
ಪುತ್ತೂರು, ಬೆಳ್ತಂಗಡಿ
August 5, 2026
ಪ್ರಮುಖ ಸುದ್ದಿಬೆಳ್ತಂಗಡಿ

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

ಬೆಳ್ತಂಗಡಿ: ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆಯು ಜೂ.21 ರಂದು ನಡೆಯಿತು.

ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.

ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ದೀಪಕ್ ಜಿ., ಕಿರಣ್, ಸಂತೋಷ್, ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya
error: Content is protected !!