30.6 C
ಪುತ್ತೂರು, ಬೆಳ್ತಂಗಡಿ
June 21, 2026
ಪ್ರಮುಖ ಸುದ್ದಿಬೆಳ್ತಂಗಡಿ

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

ಬೆಳ್ತಂಗಡಿ: ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆಯು ಜೂ.21 ರಂದು ನಡೆಯಿತು.

ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.

ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ದೀಪಕ್ ಜಿ., ಕಿರಣ್, ಸಂತೋಷ್, ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya
error: Content is protected !!