August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಜೂನ್ ೨೧ರಂದು ಜರುಗಿತು.

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಪ್ರತೀತ್ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದಿಂದ ಮನಸ್ಸು ಮತ್ತು ದೇಹ ಲವಲವಿಕೆಯಿಂದ ಇರುತ್ತದೆ. ಯೋಗ ಎಂದರೆ ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಒಂದು ಪ್ರಾಚೀನ ಭಾರತೀಯ ಪದ್ಧತಿ. “ಯೋಗ” ಎಂಬ ಪದವು ಸಂಸ್ಕೃತದ ಯುಜ್ ಧಾತುವಿನಿಂದ ಬಂದಿದ್ದು, ಅದರ ಅರ್ಥ “ಸೇರುವುದು” ಅಥವಾ “ಒಗ್ಗೂಡುವುದು ಎಂದು ಅರ್ಥ ಎಂದರು.

ರತ್ನ ಮಾನಸದ ನಿಲಯಪಾಲಕ ಯತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಯೋಗದ ಮುಖ್ಯ ಪ್ರಯೋಜನಗಳು ದೇಹದ ಲವಚಿಕತೆ (Flexibility) ಹೆಚ್ಚಿಸುತ್ತದೆ. ಸ್ನಾಯುಗಳ ಬಲವನ್ನು ವೃದ್ಧಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.ಏಕಾಗ್ರತೆ ಮತ್ತು ಮನಶ್ಶಾಂತಿಯನ್ನು ಹೆಚ್ಚಿಸುತ್ತದೆ. ಆರೋಗ್ಯಕರ ಜೀವನಶೈಲಿಗೆ ಸಹಕಾರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಕಿರಣ್ ಕೇವಲ ಇವತ್ತು ಮಾತ್ರ ಯೋಗ ಮಾಡಿದರೆ ಸಾಲದು ಪ್ರತಿನಿತ್ಯ ನಮ್ಮ ಜೀವನದ ಒಂದು ಅಂಗವಾಗಿ ಯೋಗವನ್ನು ಮಾಡಬೇಕು ಎಂದರು.

ವೇದಿಕೆಯಲ್ಲಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ತರಬೇತಿ ನೀಡಿದ ವಿದ್ಯಾರ್ಥಿಗಳಾದ ನಂದಿತ ವೆಟ್ರಿವೆಲ್ ಪ್ರಾಂಜಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರಾದ ಚಂದ್ರಶೇಖರ ಭಟ್ ಸ್ವಾಗತಿಸಿದರು. ಜ್ಞಾನೇಶ್ ವಂದಿಸಿದರು. ರವೀಶ್ ಕಾರ್ಯಕ್ರಮ ನಿರೂಪಿಸಿದರು

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!