23 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಪದವಿಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೌಮ್ಯತಿಲಕ್ ಶೆಟ್ಟಿ ಇವರ ಚೊಚ್ಚಲ ಕವನ ಸಂಕಲನ ‘ಮಸಿಯ ಮಾತು’ ಬಿಡುಗಡೆ ಸಮಾರಂಭ ಜೂ.26 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ವಿಶ್ರಾಂತ ಕುಲಸಚಿವರು ಹಾಗೂ ಆಡಳಿತ ನಿರ್ದೇಶಕರಾದ ಡಾ। ಬಿ. ಪಿ. ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ.
ಮೂಡುಬಿದಿರೆ ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ. ಕೃತಿಯನ್ನು ಪರಿಚಯಿಸಲಿದ್ದಾರೆ. ಉಜಿರೆಯ ಹವ್ಯಾಸಿ ಬರಹಗಾರ್ತಿ ಆಶಾ ಅಡೂರ್ ಶುಭಾಶಂಸನೆಗೈಯಲಿದ್ದಾರೆ.

ಇದೇ ವೇಳೆ ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಸೇರಿದಂತೆ ಹಲವು ಗಣ್ಯರು ಗೌರವ ಉಪಸ್ಥಿತರಿರಲಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಕನ್ನಡ ವಿಭಾಗದ ಡಾ| ಸುಧಾರಾಣಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.

ಇದು ಲೇಖಕಿ ಸೌಮ್ಯತಿಲಕ್ ಶೆಟ್ಟಿ ಇವರ ಮೊದಲ ಸಾಹಿತ್ಯ ಕೃತಿಯಾಗಿದ್ದು, ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸೌಮ್ಯತಿಲಕ್ ಶೆಟ್ಟಿ ಮತ್ತು ತಿಲಕ್ ಶೆಟ್ಟಿ ವಿನಂತಿಸಿದ್ದಾರೆ.

Related posts

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya
error: Content is protected !!