24.1 C
ಪುತ್ತೂರು, ಬೆಳ್ತಂಗಡಿ
June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಪದವಿಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೌಮ್ಯತಿಲಕ್ ಶೆಟ್ಟಿ ಇವರ ಚೊಚ್ಚಲ ಕವನ ಸಂಕಲನ ‘ಮಸಿಯ ಮಾತು’ ಬಿಡುಗಡೆ ಸಮಾರಂಭ ಜೂ.26 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ವಿಶ್ರಾಂತ ಕುಲಸಚಿವರು ಹಾಗೂ ಆಡಳಿತ ನಿರ್ದೇಶಕರಾದ ಡಾ। ಬಿ. ಪಿ. ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ.
ಮೂಡುಬಿದಿರೆ ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ. ಕೃತಿಯನ್ನು ಪರಿಚಯಿಸಲಿದ್ದಾರೆ. ಉಜಿರೆಯ ಹವ್ಯಾಸಿ ಬರಹಗಾರ್ತಿ ಆಶಾ ಅಡೂರ್ ಶುಭಾಶಂಸನೆಗೈಯಲಿದ್ದಾರೆ.

ಇದೇ ವೇಳೆ ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಸೇರಿದಂತೆ ಹಲವು ಗಣ್ಯರು ಗೌರವ ಉಪಸ್ಥಿತರಿರಲಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಕನ್ನಡ ವಿಭಾಗದ ಡಾ| ಸುಧಾರಾಣಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.

ಇದು ಲೇಖಕಿ ಸೌಮ್ಯತಿಲಕ್ ಶೆಟ್ಟಿ ಇವರ ಮೊದಲ ಸಾಹಿತ್ಯ ಕೃತಿಯಾಗಿದ್ದು, ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸೌಮ್ಯತಿಲಕ್ ಶೆಟ್ಟಿ ಮತ್ತು ತಿಲಕ್ ಶೆಟ್ಟಿ ವಿನಂತಿಸಿದ್ದಾರೆ.

Related posts

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya
error: Content is protected !!