June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು.

ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ ಬಾಳಿಗ, ಹಾರ್ಮೋನಿಯಂ ಅನ್ನು ಲಕ್ಷ್ಮೀನಾರಾಯಣ ರಾವ್ ಹಾಗೂ ಕೀ ಬೋರ್ಡ್ ಇದನ್ನು ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ನುಡಿಸುವುದರ ಮೂಲಕ ಮುಂಬರುವ ದಿನಗಳಲ್ಲಿ ಪಕ್ಕ ವಾದ್ಯಗಳ ತರಬೇತಿಗಳಿಗೂ ಸಹ ವಿದ್ಯುಕ್ತ ಚಾಲನೆಯನ್ನು ನೀಡಿದರು.

ಬಳಿಕ ಮಾತನಾಡಿದ ಅವರುಗಳು ವಿದ್ಯಾರ್ಥಿ ಜೀವನದಲ್ಲಿ ಸಂಗೀತದ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹತ್ವವನ್ನು, ಓದಿನ ಜೊತೆಗಿನ ಇಂತಹ ಚಟುವಟಿಕೆಗಳು ಆಧುನಿಕ ಜಗತ್ತಿಗೆ ಯಾಕೆ ಬೇಕು ವಿಚಾರಗಳನ್ನು ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಕಚೇರಿ ಕೊಳಲು ವಾದನ ಹಾಗೂ ಕೀಬೋರ್ಡ್ ನುಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಆ ಮೂಲಕ ವಿಶ್ವ ಸಂಗೀತ ದಿನವನ್ನು ಆಚರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಲ್ಲಿನಾಥ್ ಜೈನ್, ಶಂಬು ಶಂಕರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!