24.1 C
ಪುತ್ತೂರು, ಬೆಳ್ತಂಗಡಿ
June 23, 2026
Uncategorized

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ತುತ್ತಮ ಸಾಧನೆಗಾಗಿ
ಬೆಳ್ತಂಗಡಿ ನಗರದ ಕೆಲ್ಲಗುತ್ತು ನಿವಾಸಿ ಪ್ರಸ್ತುತ ಉಡುಪಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಿವಿಲ್ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ.ವಿಜಯ ಕುಮಾರ್ ಅವರು ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೆಕರು ಬೆಂಗಳೂರು ಇವರು ಕೊಡುವ 2026 ನೇ ಸಾಲಿನ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಅಯ್ಕೆ ಆಗಿರುತ್ತಾರೆ
ಬಿ.ವಿಜಯ ಕುಮಾರ್ ಅವರು ಈ ಮೊದಲು 2022ರಲ್ಲಿ
ಮುಖ್ಯ ಮಂತ್ರಿ ಯವರ ಚಿನ್ನದ ಪದಕ ಹಾಗೂ 2024ರಲ್ಲಿ ಭಾರತದ ರಾಷ್ಟ್ರ ಪತಿಗಳ ಶ್ಲಾಘನೀಯ ಪದಕಕ್ಕೆ ಪಾತ್ರರಾಗಿದ್ದರು.


ಇವರು ಮೂಲತಃ ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು
ದಿ|ಗೋಪಾಲ್ ಕೃಷ್ಣ ಮತ್ತು ಶಾರದ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಸುಮಾರು 33 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇವರು ಈ ಮೊದಲು ಉಳ್ಳಾಲ, ಪಣಂಬೂರು, ಕದ್ರಿ, ಉರ್ವ, ಪುತ್ತೂರು ನಗರ, ಉಡುಪಿ ನಗರ, ಉಡುಪಿ ಸಂಚಾರ ಮಹಿಳಾ ಠಾಣೆ, ಡಿ ಸಿ ಅರ್ ಬಿ ಮುಂತಾದ ಕಡೆ ಸೇವೆ ಸಲ್ಲಿಸಿರುತ್ತಾರೆ.

Related posts

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!