23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್( ರಿ) ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಘಟಕ ಇದರ ಆಶ್ರಯದಲ್ಲಿ ಸಾಹಿತ್ಯ ಮೂಲ ಸಾಮಾಜಿಕ ಶಿಷ್ಟಾಚಾರ ಉಪನ್ಯಾಸ ಕಾರ್ಯಕ್ರಮವು ಅಭ್ಯಾಸ ಪದವಿ ಪೂರ್ವ ಕಾಲೇಜು ಪ್ರಗತಿನಗರ ಕಾಶಿಬೆಟ್ಟು ಇಲ್ಲಿ ನಡೆಯಿತು.

ಸಾಹಿತ್ಯ ಮೂಲ ಸಾಮಾಜಿಕ ಶಿಷ್ಟಾಚಾರದ ಬಗ್ಗೆ, ಸಂಪನ್ಮೂಲ ವ್ಯಕ್ತಿ ಡಾ ಎಮ್.ಎನ್. ರವಿ ಮಂಡ್ಯ ಇವರು ಕೌಟುಂಬಿಕ ಶಿಷ್ಟಾಚಾರ, ಸಾಮಾಜಿಕ ಶಿಷ್ಟಾಚಾರ, ಔದ್ಯೋಗಿಕ ಶಿಷ್ಟಾಚಾರ ವಿಷಯಗಳ ಬಗ್ಗೆ ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಭ್ಯಾಸ್ ಕಾಲೇಜಿನ ಅಧ್ಯಕ್ಷ ಎಂ ಎಸ್ ಕಾರ್ತಿಕೇಯ ಇವರು ಇಂದಿನ ದಿನಮಾನದಲ್ಲಿ ಬೇಕಾದ ಶಿಷ್ಟಾಚಾರದ ಅವಶ್ಯಕತೆಗಾಗಿ ಈ ಕಾರ್ಯಕ್ರಮ ತುಂಬಾ ಅತ್ಯವಶ್ಯ ಎಂದರು. ಇದೇ ಸಂದರ್ಭ ಅಭ್ಯಾಸ್ ಕಾಲೇಜಿನ ಸ್ಟಡಿ ಮೆಟೀರಿಯಲ್ ಅನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಗೈದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಅಧ್ಯಕ್ಷ ಪ್ರೊ ಗಣಪತಿ ಕುಳ ಮರ್ವ ಸ್ವಾಗತಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಸ್ತಾವನೆ ಗೈದರು.

ಅಭಾಸಾಪ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಅಡೂರ್, ಸಮಿತಿ ಸದಸ್ಯೆ ಅಕ್ಷತಾ ಅಡೂರ್ ಕಾರ್ಯಕ್ರಮ ಕ್ಕೆ ಸಹಕರಿಸಿದರು. ಅಭಾಸಾಪ ಸಮಿತಿ ಸದಸ್ಯರಾದ ತ್ರಿವಿಕ್ರಮ ಹೆಬ್ಬಾರ್, ಅಭ್ಯಾಸ್ ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರ ಶೇಖರ್ ಗೌಡ, ಇತರ ಉಪನ್ಯಾಸಕರು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.


ಅಭಾಸಾಪ ಜತೆಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು, ಸುದೀರ್‌ ಧನ್ಯವಾದವನ್ನಿತ್ತರು.

Related posts

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!