June 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

ಬಳಂಜ: ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರು ಇಂದಿನ ಯುವ ಸಮಾಜಕ್ಕೆ ಪ್ರೇರಣೆ‌ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು.

ಭಾರತೀಯ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ಜೂ 21ರಂದು ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಂಜಿತ್ ಪೂಜಾರಿಯವರನ್ನು ಮಂಡಳಿಯ ವತಿಯಿಂದ ಶಾಲು, ಪೇಟ, ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಂಜಿತ್ ಪೂಜಾರಿಯವರು ಭಾರತೀಯ ಸೇನೆಗೆ ಆಯ್ಕೆಯಾಗಲು ಪಟ್ಟ ಪ್ರಯತ್ನ ಹಾಗೂ ಸವಾಲುಗಳ ಕುರಿತು ಮಂಡಳಿಯ ಸದಸ್ಯರೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ, ನಾಲ್ಕೂರು, ಯುವ ಶಕ್ತಿ ತಂಡದ ಪ್ರಮುಖರಾದ ಸಂತೋಷ್ ಕುಮಾರ್ ಹಿಮರಡ್ಡ,ಶರತ್ ಅಂಚನ್,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಸಿದ್ದಿ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ‌ ಸ್ವಾಗತಿಸಿ, ನಿರೂಪಿಸಿದರು.ತರಭೇತುದಾರೆ ಮಾನ್ಯ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya
error: Content is protected !!