28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಹಾಗೂ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಪಿಕಾ ಶೆಟ್ಟಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ದೀಪಿಕಾ ಶೆಟ್ಟಿ ಅವರು ಯೋಗದ ಮಹತ್ವ, ಅದರ ವೈಜ್ಞಾನಿಕ ಹಿನ್ನೆಲೆ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗವು ಬೀರುವ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವರವಾಗಿ ತಿಳಿಸಿದರು.

ಬಳಿಕ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಆಥಿರೈ ಸಿ., ಕಮಲಿ ಜಿ. ಹಾಗೂ ಲೋಚನ ಆರ್. ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಯಿತು. ಈ ಯೋಗ ಪ್ರದರ್ಶನವು ಎಲ್ಲರ ಗಮನ ಸೆಳೆಯುವಂತಿತ್ತು.

ಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಸಹ ಶಿಕ್ಷಕಿ ವಿನಯಲತಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya
error: Content is protected !!