23.2 C
ಪುತ್ತೂರು, ಬೆಳ್ತಂಗಡಿ
August 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಗುರುವಾಯನಕರೆ: ಯೋಗಾಭ್ಯಾಸ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಲವರ್ಧನೆಗೆ ಅತ್ಯಗತ್ಯ ಎಂದು ಖ್ಯಾತ ಯೋಗಗುರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ರ್ಡ್ ನಲ್ಲಿ ದಾಖಲಾದ ಆವಿಷ್ಕಾರ ಯೋಗ ಸಂಸ್ಥೆಯ ಸಂಸ್ಥಾಪಕರಾದ ಕುಶಾಲಪ್ಪ ಗೌಡ ಅವರು ಹೇಳಿದರು.

ಆಧುನಿಕ ದಿನಗಳ ಒತ್ತಡದಿಂದ ಹೊರಗೆ ಬರಲು ಯೋಗ ಪರಮ ಪ್ರಯೋಜನಕಾರಿ ಎಂದು ಅವರು ಹೇಳಿದರು.

ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಮಾತನಾಡಿ, ಭಾರತ ಜಗತ್ತಿಗೆ ಕೊಟ್ಟ ಹಲವು ಮಹತ್ತ್ವದ ಕೊಡುಗೆಗಳಲ್ಲಿ ಯೋಗವೂ ಒಂದು. ಇಂದಿನ ತಲೆಮಾರು ಅದರ ಸದುಪಯೋಗ ಪಡೆದುಕೊಳ್ಳ ಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಟೆಕ್ನೋ ಸ್ಕೂಲ್ ನ ಪ್ರಾಂಶುಪಾಲರಾದ ಸುಮಿತ್ರ ಅವರು ಮಾತನಾಡಿ, ಏಕಾಗ್ರತೆಗೆ ಯೋಗ ಸಹಕಾರಿ. ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡ ಬೇಕೆಂದರು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ಬಳಿಕ ವಿನೂತನವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಲಾಯಿತು.

ಯೋಗಗುರು ಕುಶಾಲಪ್ಪ ಗೌಡ ಅವರು ವಿದ್ಯಾರ್ಥಿಗಳಿಗೆ ಪ್ರಮುಖ ಆಸನಗಳನ್ನು ಮಾಡಿಸುವುದರ ಮೂಲಕ ಯೋಗ ದಿನಾಚರಣೆಗೆ ಹೊಸ ಮೆರುಗನ್ನು ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಸುಂದರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಧ್ಯಾನ ಹಾಗೂ ಸೂರ್ಯ ನಮಸ್ಕಾರವನ್ನು ಮಾಡಲಾಯಿತು.

ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು. 8ನೇ ತರಗತಿಯ ವಿದ್ಯಾರ್ಥಿನಿ ಕು.ಶಝ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಏಳನೇ ತರಗತಿಯ ವಿದ್ಯಾರ್ಥಿನಿ ಕು. ಫಿದಾ ಫಾತಿಮಾ ಸ್ವಾಗತಿಸಿದರು. 6ನೇ ತರಗತಿಯ ಕು.ದೈಶೀ ಧನ್ಯವಾದ ಸಮರ್ಪಿಸಿದರು.

Related posts

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya
error: Content is protected !!