ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಪದವಿಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೌಮ್ಯತಿಲಕ್ ಶೆಟ್ಟಿ ಇವರ ಚೊಚ್ಚಲ ಕವನ ಸಂಕಲನ ‘ಮಸಿಯ ಮಾತು’ ಬಿಡುಗಡೆ ಸಮಾರಂಭ ಜೂ.26 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ವಿಶ್ರಾಂತ ಕುಲಸಚಿವರು ಹಾಗೂ ಆಡಳಿತ ನಿರ್ದೇಶಕರಾದ ಡಾ। ಬಿ. ಪಿ. ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ.
ಮೂಡುಬಿದಿರೆ ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ. ಕೃತಿಯನ್ನು ಪರಿಚಯಿಸಲಿದ್ದಾರೆ. ಉಜಿರೆಯ ಹವ್ಯಾಸಿ ಬರಹಗಾರ್ತಿ ಆಶಾ ಅಡೂರ್ ಶುಭಾಶಂಸನೆಗೈಯಲಿದ್ದಾರೆ.
ಇದೇ ವೇಳೆ ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಸೇರಿದಂತೆ ಹಲವು ಗಣ್ಯರು ಗೌರವ ಉಪಸ್ಥಿತರಿರಲಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಕನ್ನಡ ವಿಭಾಗದ ಡಾ| ಸುಧಾರಾಣಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.
ಇದು ಲೇಖಕಿ ಸೌಮ್ಯತಿಲಕ್ ಶೆಟ್ಟಿ ಇವರ ಮೊದಲ ಸಾಹಿತ್ಯ ಕೃತಿಯಾಗಿದ್ದು, ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸೌಮ್ಯತಿಲಕ್ ಶೆಟ್ಟಿ ಮತ್ತು ತಿಲಕ್ ಶೆಟ್ಟಿ ವಿನಂತಿಸಿದ್ದಾರೆ.












