24.1 C
ಪುತ್ತೂರು, ಬೆಳ್ತಂಗಡಿ
June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಕ್ರೀಡಾ ಸಂಘ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.20 ರಂದು ನಡೆಯಿತು.

ಉದ್ಘಾಟಕರಾಗಿ ಮಾಜಿ ಸೈನಿಕರು ಹಾಗೂ ನಿವೃತ್ತ ಉಪನ್ಯಾಸಕರಾದ ಹರೀಶ್ ರೈ ಧರ್ಮಶ್ರೀ, ಉಜಿರೆ ಅವರು ಮಾತನಾಡಿ, ‘ಇಂದಿನ ಸಾಮಾಜಿಕ ಜೀವನದಲ್ಲಿ ಅವಶ್ಯಕವಿರುವ ನಾಯಕತ್ವ, ಸೇವಾಮನೋಭಾವನೆ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳು ಅತ್ಯುತ್ತಮ ವೇದಿಕೆ’ ಎಂದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸರ್ವರನ್ನೂ ಸ್ವಾಗತಿಸಿದರು.
ಶತಾಬ್ದಿ ವಿದ್ಯಾಲಯ ಸಮಿತಿ (ರಿ.) ಮುಂಡಾಜೆ ಇದರ ಸಂಚಾಲಕರಾದ ನಾರಾಯಣ ಫಡ್ಕೆ ಯುವ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಾಯಕರುಗಳ ಪ್ರಾಪ್ತಿ, ಮೋಕ್ಷಿತ್, ಅನೀಕ್ಷಾ ಹಾಗೂ ಯಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಪ್ರಾಪ್ತಿ ತಮ್ಮ ಮಂತ್ರಿ ಮಂಡಲದ ಮುಂದಿನ ಯೋಚನೆ-ಯೋಜನೆಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ನಮಿತಾ ಕೆ. ಆರ್. ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya
error: Content is protected !!