23 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಕ್ರೀಡಾ ಸಂಘ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.20 ರಂದು ನಡೆಯಿತು.

ಉದ್ಘಾಟಕರಾಗಿ ಮಾಜಿ ಸೈನಿಕರು ಹಾಗೂ ನಿವೃತ್ತ ಉಪನ್ಯಾಸಕರಾದ ಹರೀಶ್ ರೈ ಧರ್ಮಶ್ರೀ, ಉಜಿರೆ ಅವರು ಮಾತನಾಡಿ, ‘ಇಂದಿನ ಸಾಮಾಜಿಕ ಜೀವನದಲ್ಲಿ ಅವಶ್ಯಕವಿರುವ ನಾಯಕತ್ವ, ಸೇವಾಮನೋಭಾವನೆ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳು ಅತ್ಯುತ್ತಮ ವೇದಿಕೆ’ ಎಂದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸರ್ವರನ್ನೂ ಸ್ವಾಗತಿಸಿದರು.
ಶತಾಬ್ದಿ ವಿದ್ಯಾಲಯ ಸಮಿತಿ (ರಿ.) ಮುಂಡಾಜೆ ಇದರ ಸಂಚಾಲಕರಾದ ನಾರಾಯಣ ಫಡ್ಕೆ ಯುವ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಾಯಕರುಗಳ ಪ್ರಾಪ್ತಿ, ಮೋಕ್ಷಿತ್, ಅನೀಕ್ಷಾ ಹಾಗೂ ಯಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಪ್ರಾಪ್ತಿ ತಮ್ಮ ಮಂತ್ರಿ ಮಂಡಲದ ಮುಂದಿನ ಯೋಚನೆ-ಯೋಜನೆಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ನಮಿತಾ ಕೆ. ಆರ್. ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Related posts

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!