June 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

ಬಳಂಜ: ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರು ಇಂದಿನ ಯುವ ಸಮಾಜಕ್ಕೆ ಪ್ರೇರಣೆ‌ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು.

ಭಾರತೀಯ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ಜೂ 21ರಂದು ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಂಜಿತ್ ಪೂಜಾರಿಯವರನ್ನು ಮಂಡಳಿಯ ವತಿಯಿಂದ ಶಾಲು, ಪೇಟ, ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಂಜಿತ್ ಪೂಜಾರಿಯವರು ಭಾರತೀಯ ಸೇನೆಗೆ ಆಯ್ಕೆಯಾಗಲು ಪಟ್ಟ ಪ್ರಯತ್ನ ಹಾಗೂ ಸವಾಲುಗಳ ಕುರಿತು ಮಂಡಳಿಯ ಸದಸ್ಯರೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ, ನಾಲ್ಕೂರು, ಯುವ ಶಕ್ತಿ ತಂಡದ ಪ್ರಮುಖರಾದ ಸಂತೋಷ್ ಕುಮಾರ್ ಹಿಮರಡ್ಡ,ಶರತ್ ಅಂಚನ್,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಸಿದ್ದಿ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ‌ ಸ್ವಾಗತಿಸಿ, ನಿರೂಪಿಸಿದರು.ತರಭೇತುದಾರೆ ಮಾನ್ಯ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya
error: Content is protected !!