23 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿರುವರುಲ್ ಸೆಲ್ವನ್ ಹಾಗೂ ಪುಟ್ಲೂರು ಹೇಮಲತ ರೆಡ್ಡಿ ಅವರು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ ಯೋಗಾಭ್ಯಾಸ ನಡೆಸಿಕೊಟ್ಟರು. ಅಲ್ಲದೆ, ಯೋಗದ ಮಹತ್ವ, ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳು ಹಾಗೂ ದೈನಂದಿನ ಜೀವನದಲ್ಲಿ ಯೋಗದ ಅಗತ್ಯತೆ ಕುರಿತು ಮಾಹಿತಿ ನೀಡಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡುವಂತೆ ಕರೆ ನೀಡಿದರು.

ಶಿಕ್ಷಕಿ ಸವಿತಾ ವೇದಾಪ್ರಕಾಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya
error: Content is protected !!